ಬೆಂಗಳೂರು, ಜೂ 10 (DaijiworldNews/DB): ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ವಿಧಾನಸೌಧದಲ್ಲಿ ಕಾಂಗ್ರೆಸ್ ಕಚೇರಿಗೆ ಆಕಸ್ಮಿಕವಾಗಿ ಪ್ರವೇಶಿಸಿ ಎಡವಟ್ಟು ಮಾಡಿಕೊಂಡ ಪ್ರಸಂಗ ಶುಕ್ರವಾರ ನಡೆಯಿತು.
ರಾಜ್ಯಸಭಾ ಚುನಾವಣೆಗೆ ಮತದಾನ ನಡೆಯುತ್ತಿರುವ ವೇಳೆ ಸಿ.ಟಿ. ರವಿ ಈ ಎಡವಟ್ಟು ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ಸಿ.ಟಿ. ರವಿ ಹೋದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಲ್ಲಿದ್ದರು. ಅವರನ್ನು ನೋಡಿದ ಸಿ.ಟಿ. ರವಿ ಇದು ಕಾಂಗ್ರೆಸ್ ಕಚೇರಿ ಎಂದು ಅರಿತುಕೊಂಡು ಹಿಂತಿರುಗಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ. ರವಿ, ಆಕಸ್ಮಿಕವಾಗಿ ಕಾಂಗ್ರೆಸ್ ಕೊಠಡಿ ಪ್ರವೇಶಿಸಿದ್ದೆ. ಆದರೆ ಕಾಂಗ್ರೆಸ್ ನಾಯಕರನ್ನು ನೋಡಿ ಬಾಗಿಲಿನಿಂದಲೇ ವಾಪಸ್ಸಾದೆ ಎಂದು ತಿಳಿಸಿದರು.