ನವದೆಹಲಿ, ಜೂ 10 (DaijiworldNews/HR): ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿ ಸಂಕೀರ್ಣದ ಚಿತ್ರೀಕರಣಕ್ಕೆ ಆದೇಶ ನೀಡಿದ ನ್ಯಾಯಾಧೀಶರಿಗೆ ಬೆದರಿಕೆ ಪತ್ರ ಬಂದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಇಸ್ಲಾಮಿಕ್ ಅಗಾಜ್ ಮೂವ್ಮೆಂಟ್ನ ಕಾಶಿಫ್ ಅಹ್ಮದ್ ಸಿದ್ದಿಕಿ ಎಂಬಾತ ಬರೆದಿರುವ ಬೆದರಿಕೆ ಪತ್ರ ಬಂದಿದ್ದು, ವಾರಣಾಸಿ ಸಿವಿಲ್ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನು ಜ್ಞಾನವಾಪಿ ಮಸೀದಿ ಸಂಕೀರ್ಣವನ್ನು ಪರಿಶೀಲಿಸುವುದು ಸಾಮಾನ್ಯ ಪ್ರಕ್ರಿಯೆ ಎಂದು ನೀವು ಹೇಳಿಕೆ ನೀಡಿದ್ದೀರಿ. ನೀವು ವಿಗ್ರಹಾರಾಧಕರು, ನೀವು ಮಸೀದಿಯನ್ನು ಮಂದಿರ ಎಂದು ಘೋಷಿಸುತ್ತೀರಿ. ಮೂರ್ತಿಪೂಜಕ ಹಿಂದೂ ನ್ಯಾಯಾಧೀಶರಿಂದ ಸರಿಯಾದ ನಿರ್ಧಾರವನ್ನು ಯಾವುದೇ ಮುಸಲ್ಮಾನ ನಿರೀಕ್ಷಿಸುವುದಿಲ್ಲ ಎಂದು ಪತ್ರದಲ್ಲಿ ಬರೆಯಾಗಿದೆ.