ಬೆಂಗಳೂರು, ಜೂ 10 (DaijiworldNews/MS): ಕಾಂಗ್ರೆಸ್ ಚುನಾವಣಾ ಏಜೆಂಟ್ ಡಿ.ಕೆ.ಶಿವಕುಮಾರ್ ಅವರಿಗೆ ತೋರಿಸಿ ಮತ ಹಾಕಿದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರ ಮತವನ್ನು ಅಸಿಂಧುಗೊಳಿಸುವಂತೆ ಬಿಜೆಪಿ ಆಗ್ರಹಿಸಿದೆ.
ರೇವಣ್ಣ ಅವರು ಮತ ಚಲಾಯಿಸುವ ಸಂದರ್ಭದಲ್ಲಿ ತಮ್ಮ ಮತವನ್ನು ಕಾಂಗ್ರೆಸ್ ಚುನಾವಣಾ ಏಜೆಂಟ್ ಡಿ.ಕೆ.ಶಿವಕುಮಾರ್ ಅವರಿಗೆ ತೋರಿಸಿ ಮತ ಹಾಕಿದ್ದಾರೆ. ಇದು ಚುನಾವಣಾ ನಿಯಮದ ಉಲ್ಲಂಘನೆ. ಹೀಗಾಗಿ ಅವರ ಮತ ಅಸಿಂಧುಗೊಳಿಸುವಂತೆ ಬಿಜೆಪಿ ಚುನಾವಣಾಧಿಕಾರಿಗೆ ದೂರು ನೀಡಿದೆ.
ಆದರೆ ಈ ಆರೋಪವನ್ನು ರೇವಣ್ಣ ತಳ್ಳಿಹಾಕಿದ್ದು , ಡಿಕೆ ಶಿವಕುಮಾರ್ ಗೆ ತೋರಿಸಿ ಮತ ಚಲಾಯಿಸಿಲ್ಲ , ನಾನು ಪುಟ್ಟರಾಜು ಅವರಿಗೆ ತೋರಿಸಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಒಟ್ಟಾರೆ ಬಿಜೆಪಿ ದೂರಿನಿಂದ ರಾಜ್ಯಸಭೆ ಚುನಾವಣೆ ಫಲಿತಾಂಶ ವಿಳಂಭವಾಗುವ ಸಾಧ್ಯತೆ ಇದೆ. ಈ ದೂರನ್ನು ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತಂದು ಇತ್ಯರ್ಥಪಡಿಸಿದ ಬಳಿಕವಷ್ಟೇ ಮತ ಎಣಿಕೆ ಪ್ರಾರಂಭವಾಗಲಿದೆ