ಬೆಂಗಳೂರು, ಜೂ 10 (DaijiworldNews/HR): ಕೆಲದಿನಗಳ ಹಿಂದೆ ಬೆಂಗಳೂರಿನಲ್ಲಿ ಯುವತಿ ಮೇಲೆ ನಡೆದ ಆ್ಯಸಿಡ್ ದಾಳಿ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಆ್ಯಸಿಡ್ ದಾಳಿ ಪ್ರಕರಣ ನಡೆದಿದೆ.
ಬೆಂಗಳೂರಿನ ಸಾರಕ್ಕಿ ಬಳಿ ಮಹಿಳೆ ಮೇಲೆ ಆ್ಯಸಿಡ್ ದಾಳಿ ನಡೆದಿದ್ದು, ಪರಿಚಯಸ್ಥನೆ ಮಹಿಳೆಯ ಮೇಲೆ ಆ್ಯಸಿಡ್ ದಾಳಿ ಮಾಡಿದ್ದು ಮಹಿಳೆಯನ್ನು ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ವಿವಾಹಿತ ಮಹಿಳೆಯನ್ನು ಪ್ರೀತಿಸುತ್ತಿದ್ದ ಆರೋಪಿ ಅಹ್ಮದ್, ಮಹಿಳೆಗೆ ಮದುವೆಯಾಗುವಂತೆ ಆರೋಪಿ ಅಹ್ಮದ್ ದುಂಬಾಲು ಬಿದ್ದಿದ್ದ ಎನ್ನಲಾಗಿದ್ದು, ಇದಕ್ಕೆ ಒಪ್ಪದಿದ್ದಾಗ ಆರೋಪಿ ಮಹಿಳೆಗೆ ಆ್ಯಸಿಡ್ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.