ಬೆಂಗಳೂರು, ಜೂ 10 (DaijiworldNews/HR): ಇಂದು ರಾಜ್ಯಸಭಾ ಚುನಾವಣಾ ಮತದಾನ ನಡೆಯುತ್ತಿದ್ದು ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರ ಮತವನ್ನ ಅಸಿಂಧುಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ದೂರು ನೀಡಿದ್ದು, ಈ ಬಳಿಕ ರೇವಣ್ಣ ಮತ ಅಸಿಂಧು ಅಲ್ಲ ಚುನಾವಣಾ ಅಧಿಕಾರಿ ಮಾಹಿತಿ ನೀಡಿದ್ದಾರೆ.
ವಿಧಾನಸೌಧದದಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು ಈ ನಡುವೆ ವೊಟಿಂಗ್ ಬಳಿಕ ರೇವಣ್ಣ ಅವರು ಮತ ಹಾಕಿದ್ದನ್ನು ಡಿ.ಕೆ ಶಿವಕುಮಾರ್ ಅವರಿಗೆ ತೋರಿಸಿದ್ದಾರೆ.
ಇನ್ನು ಹೆಚ್.ಡಿ ರೇವಣ್ಣ ಮತವನ್ನು ಡಿಕೆಶಿಗೆ ಪ್ರದರ್ಶಿಸಿದ್ದು, ಹೀಗಾಗಿರೇವಣ್ಣರ ಮತವನ್ನ ಅಸಿಂಧುಗೊಳಿಸುವಂತೆ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಜೈರಾಮ್ ರಮೇಶ್ ಪೊಲೀಸ್ ಏಜೇಂಟ್ ಪ್ರಕಾಶ್ ರಾಥೊಡ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.