ಹಾಸನ, ಜೂ 13 (DaijiworldNews/HR): ಪಠ್ಯಪುಸ್ತಕ ಪರಿಷ್ಕರಣೆ ಮುಗಿದಿದ್ದು, ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಬರಗೂರು ರಾಮಚಂದ್ರಪ್ಪ ಪಠ್ಯಪುಸ್ತಕ ಪರಿಷ್ಕರಣೆ ಸಮಯದಲ್ಲಿ ಉನ್ನೀಕೃಷ್ಣನ್, ಮೈಸೂರು ಮಹಾರಾಜರು, ಕೆಂಪೇಗೌಡರು,ಕುವೆಂಪು ಅಧ್ಯಾಯ ತೆಗೆದಿದ್ದು, ಇದಕ್ಕೆ ಕಾಂಗ್ರೆಸ್ ನಲ್ಲಿ ಉತ್ತರವಿಲ್ಲ. ಆದರೆ ಕಾಂಗ್ರೆಸ್ ಗೆ ಟಿಪ್ಪು ಸುಲ್ತಾನ್ ಪಠ್ಯ ತೆಗೆದಿದ್ದು ಅರಗಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ಹಿಂದೂ ಸಮಾಜವನ್ನು ಒಡೆಯಲು ಪ್ರತಿಪಕ್ಷದವರು ಪಠ್ಯ ಪರಿಷ್ಕರಣೆ ವಿಚಾರ ಕೈಗೆತ್ತಿಕೊಂಡಿದ್ದು, ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಮುಗಿದಿದೆ ಎಂದು ಹೇಳಿದ್ದಾರೆ.