ನವದೆಹಲಿ, ಜೂ 14 (DaijiworldNews/MS): ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರು ಎರಡನೇ ದಿನ ಜಾರಿ ನಿರ್ದೇಶನಾಲಯಕ್ಕೆ (ಇಡಿ) ವಿಚಾರಣೆಗೊಳಪಡಿಸಿದ್ದು, ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ನ ಹಲವು ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಣದೀಪ್ ಸುರ್ಜೆವಾಲಾ, ಅಧೀರ್ ರಂಜನ್ ಚೌಧರಿ, ಕೆಸಿ ವೇಣುಗೋಪಾಲ್, ಮಾಣಿಕ್ಕಂ ಠಾಗೋರ್ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರನ್ನು ದೆಹಲಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ರಾಹುಲ್ ಮಂಗಳವಾರವೂ ವಿಚಾರಣೆಗೆ ಹಾಜರಾಗಿದ್ದಾರೆ. ಇ.ಡಿ. ಅಧಿಕಾರಿಗಳು ಸೋಮವಾರ ಹತ್ತು ಗಂಟೆಗೂ ಹೆಚ್ಚು ಸಮಯ ವಿಚಾರಣೆ ನಡೆಸಿದ್ದರು.
ಬಂಧನ ಬಳಿಕ ಚಲಿಸುತ್ತಿರುವ ಬಸ್ನಿಂದಲೇ ವಿಡಿಯೊ ಮಾಡಿರುವ ಟಾಗೋರ್, 'ಪೊಲೀಸರು ನಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಗುತ್ತಿದೆ. ಅಮಿತ್ ಶಾ ಅವರ ಶಕ್ತಿ ನಮ್ಮನ್ನು ತಡೆಯಲಾಗದು' ಎಂದು ಹೇಳಿದ್ದಾರೆ.