ದಾವಣಗೆರೆ, ಜೂ 14 (DaijiworldNews/HR): ನ್ಯಾಯಾಂಗ ವ್ಯವಸ್ಥೆ ಮೇಲೆ ಭರವಸೆ ಇದ್ದಿದ್ದರೆ ಕಾಂಗ್ರೆಸ್ ತನಿಖೆ ಎದುರಿಸಬೇಕಿತ್ತು. ಈ ತನಿಖೆ ದಿಕ್ಕು ತಪ್ಪಿಸಲು ಸಾವಿರಾರು ಜನರನ್ನು ಬೀದಿಗೆ ಇಳಿಸಿ ಪ್ರತಿಭಟನೆ ಮಾಡಿಸುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನ್ಯಾಷನಲ್ ಹೆರಾಲ್ಡ್ ಪ್ರಕರಣ ನೋಡಿದರೆ ಭ್ರಷ್ಟಾಚಾರ ನಡೆದಿರುವುದು ಪ್ರಾಥಮಿಕ ಹಂತದಲ್ಲೇ ಕಂಡು ಬರುತ್ತಿದ್ದು, ಈ ಪ್ರಕರಣದ ತನಿಖೆ ಆಗಬಾರದು ಎಂಬ ಉದ್ದೇಶ ಇಟ್ಟುಕೊಂಡು ಇ.ಡಿ ಅಧಿಕಾರಿಗಳ ಮೇಲೆ ಬ್ಲಾಕ್ ಮೇಲ್ ಮಾಡಲು ಕಾಂಗ್ರೆಸ್ ಹೋರಾಟ ಮಾಡುತ್ತಿರುವುದು ದೌರ್ಭಾಗ್ಯ ಎಂದಿದ್ದಾರೆ.
ಇನ್ನು ರಾಜಕೀಯ ಪ್ರೇರಿತ ಪ್ರಕರಣಗಳನ್ನ ಹಿಂದೆ ಕಾಂಗ್ರೆಸ್ ಬಿಜೆಪಿ ಮೇಲೆ ದಾಖಲಿಸುತಿತ್ತು. ಆಗ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಒಬ್ಬರೆ ಹೋಗಿ ಸತತ 10 ಗಂಟೆ ಕಾಲ ವಿಚಾರಣೆ ಎದುರಿಸಿದ್ದರು. ಕಾಂಗ್ರೆಸ್ ಕೂಡ ಭ್ರಷ್ಟಾಚಾರ ಮಾಡಿಲ್ಲ ಅಂದ್ರೆ ತನಿಖೆಗೆ ಒಳಗಾಗಲಿ ಎಂದು ಹೇಳಿದ್ದಾರೆ.