ರಾಯಚೂರು, ಜೂ 14 (DaijiworldNews/HR): ರಾಯಚೂರಿನಲ್ಲಿ ಕಲುಷಿತ ನೀರು ಕುಡಿದ ಮತ್ತೊಬ್ಬರು ಸಾವನ್ನಪ್ಪಿದ್ದು, ಮೃತಪಟ್ಟವರ ಸಂಖ್ಯೆ 6 ಕ್ಕೆ ಏರಿಕೆಯಾಗಿದೆ.
ಮೃತಪಟ್ಟವರನ್ನು ನಯೀಮುದ್ದಿನ್ (55 ) ಎಂದು ಗುರುತಿಸಲಾಗಿದೆ.
ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿದ್ದ ನಯೀಮುದ್ದಿನ್ ಕಳೆದ 3 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಕಿಡ್ನಿ ಸಮಸ್ಯೆಯಿಂದ ಇಂದು ಸಾವನ್ನಪ್ಪಿದ್ದಾರೆ.