ನವದೆಹಲಿ, ಜೂ 14 (DaijiworldNews/HR): ಎಫ್ಐಆರ್ ದಾಖಲಾಗದೆ ಸಮನ್ಸ್ ನೀಡಲು, ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯಕ್ಕೆ ಅಧಿಕಾರವೇ ಇಲ್ಲ ಎಂದು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಎಫ್ಐಆರ್ ದಾಖಲಾಗದೆ ಸಮನ್ಸ್ ನೀಡಲು, ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯಕ್ಕೆ ಅಧಿಕಾರವೇ ಇಲ್ಲ ರಾಹುಲ್ ಗಾಂಧಿ ಅವರನ್ನು ಯಾವ ಸೆಕ್ಷನ್ ಮೇಲೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ಇನ್ನು ಬಿಜೆಪಿಯಲ್ಲಿರುವ ಖ್ಯಾತ ವಕ್ತಾರರು ದಯವಿಟ್ಟು ತಮ್ಮ ಪ್ರಶ್ನೆಗಳಿಗೆ ಉತ್ತರಿಸುವರೇ? ಜಾರಿ ನಿರ್ದೇಶನಾಲಯದ ಯಾವ ನಿಗದಿತ ಅಪರಾಧಕ್ಕಾಗಿ ರಾಹುಲ್ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿದೆ ಎಂದಿದ್ದಾರೆ.