ಕೋಲ್ಕತ್ತ, ಜೂ 14 (DaijiworldNews/DB): ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಪತ್ನಿ ರುಜಿರಾ ಅವರನ್ನು ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇಂದು ವಿಚಾರಣೆ ನಡೆಸಿದೆ.
ಇಂದು ಬೆಳಗ್ಗೆ 11.30ರ ಸುಮಾರಿಗೆ ಹರೀಶ್ ಮುಖರ್ಜಿ ರಸ್ತೆಯಲ್ಲಿರುವ ಅಭಿಷೇಕ್ ಬ್ಯಾನರ್ಜಿ ಅವರ ನಿವಾಸ ಶಾಂತಿನಿಕೇತನ್ಗೆ ಅಧಿಕಾರಿಗಳು ತೆರಳಿ ರುಜಿರಾ ಅವರನ್ನು ವಿಚಾರಣೆ ನಡೆಸಿದರು. ತಂಡದಲ್ಲಿ ಮಹಿಳಾ ಅಧಿಕಾರಿ ಸೇರಿ ಒಟ್ಟು ಎಂಟು ಮಂದಿ ಇದ್ದರು. ರುಜಿರಾ ಅವರು ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಚಾರಣೆ ಎದುರಿಸುತ್ತಿರುವುದು ಇದು ಎರಡನೇ ಬಾರಿಯಾಗಿದೆ.
ಕಳೆದ ಫೆಬ್ರವರಿಯಲ್ಲಿ ಸಿಬಿಐ ಅಧಿಕಾರಿಗಳು ರುಜಿರಾರನ್ನು ವಿಚಾರಣೆ ನಡೆಸಿದ್ದರಾದರೂ ಅಧಿಕಾರಿಗಳ ಪ್ರಶ್ನೆಗೆ ಅವರು ತೃಪ್ತಿಕರವಾದ ಉತ್ತರ ನೀಡಿರಲಿಲ್ಲ. ಈ ಕಾರಣಕ್ಕಾಗಿ ಎರಡನೇ ಬಾರಿಗೆ ವಿಚಾರಣೆ ಸಡೆಸಲಾಗುತ್ತಿದೆ ಎಂದು ಸಿಬಿಐ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.