ಮೈಸೂರು, ಜೂ 16 (DaijiworldNews/HR): ನನಗೆ ಸರ್ಕಾರಿ ಕೆಲಸ ಕೊಡಿ ಇಲ್ಲದಿದ್ದರೆ ಕೊಳವೆ ಬಾವಿ ತೊಡಿಸಿಕೊಡಿ ಎಂದು ಯುವಕನೊಬ್ಬ ಮನವಿ ಪತ್ರವನ್ನು ಮತ ಪೆಟ್ಟಿಗೆಗೆ ಹಾಕಿರುವುದು ಮತ ಎಣಿಕೆಯ ವೇಳೆ ಬೆಳಕಿಗೆ ಬಂದಿದೆ.
ನಾನು ಎಂ.ಎ, ಬಿ.ಎಡ್ ಮಾಡಿದ್ದೇನೆ. ಆದರೆ ನನಗೆ ಕೆಲಸ ಇಲ್ಲ. ಅಪ್ಪನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಜಮೀನಿಗೆ ಕೊಳವೆ ಬಾವಿಯ ಅವಶ್ಯಕತೆ ಇದೆ. ನನಗೆ ಸರ್ಕಾರಿ ಕೆಲಸ ಕೊಡಿ. ಇಲ್ಲ ಅಂದ್ರೆ ಜಮೀನಿನಲ್ಲಿ ಕೊಳವೆ ಬಾವಿ ತೊಡಿಸಿಕೊಡಿ ಎಂದು ಬರೆದಿರುವ ಮನವಿ ಪತ್ರ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯ ವೇಳೆ ಬೆಳಕಿಗೆ ಬಂದಿದೆ.
ಇನ್ನು ಪತ್ರ ಬರೆದ ಯುವಕನ ಹೆಸರು ರಾಜೇಂದ್ರ. ಈತ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಗಣಿಗನೂರು ಗ್ರಾಮದ ನಿವಾಸಿ. ರಾಜೇಂದ್ರನಂತೆಯೇ ಅನೇಕರು ಮತ ಪೆಟ್ಟಿಯೊಳಗಡೆ ವಿಭಿನ್ನ ಕೊರಿಕೆಯ ಪತ್ರಗಳನ್ನು ಹಾಕಿದ್ದಾರೆ ಎನ್ನಲಾಗಿದ್ದು, ಈ ಪತ್ರ ವೈರಲ್ ಆಗಿದೆ.