ಬೆಂಗಳೂರು, ಜೂ 16 (DaijiworldNews/HR): ರಾಜ್ಯದಲ್ಲಿ ಇಂದು ಕಾಂಗ್ರೆಸ್ ನಿಂದ ರಾಜಭವನ ಚಲೋ ಶುರುವಾಗಲಿದ್ದು, ಈ ಮುನ್ನವೇ ಕೊರೊನಾ ನಿಯಮ ಉಲ್ಲಂಘಿಸಿದ್ರೆ ಕೇಸ್ ದಾಖಲಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಜಾಥದ ಮೂಲಕ ಕೊರೊನಾ ಹೆಚ್ಚಳವಾದರೆ ಕಾಂಗ್ರೆಸ್ ಕಾರಣವಾಗುತ್ತದೆ. ಈಗಾಗಲೇ ಪ್ರತಿಭಟನೆ ಫ್ರಿಡಂಪಾರ್ಕ್ನಲ್ಲಿ ಮಾಡುವಂತೆ ಸೂಚನೆ ನೀಡಿದೆ ಆದ್ರೆ ಕಾಂಗ್ರೆಸ್ ರಸ್ತೆಯಲ್ಲಿ ಪ್ರತಿಭಟನೆ ಮಾಡುವುದರಿಂದ ಕೊರೊನಾ ಹೆಚ್ಚಾಗುತ್ತದೆ ಎಂದಿದ್ದಾರೆ.
ಇನ್ನು ಈಗಾಗಲೇ ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 12,213 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.