ನವದೆಹಲಿ, ಜೂ16(DaijiworldNews/DB): ತಮಿಳುನಾಡಿನಿಂದ ರಾಜ್ಯಸಭೆಗೆ ಆಯ್ಕೆಯಾದ ನಂತರ ಹಿರಿಯ ಕಾಂಗ್ರೆಸ್ ನಾಯಕ ಮತ್ತು ತಾಜ್ಯಸಭಾ ಸಂಸದ ಪಿ. ಚಿದಂಬರಂ ಮಹಾರಾಷ್ಟ್ರದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಉತ್ತರ ಪ್ರದೇಶ, ತಮಿಳುನಾಡು, ಆಂಧ್ರಪ್ರದೇಶ, ಬಿಹಾರ, ಮಧ್ಯಪ್ರದೇಶ, ಪಂಜಾಬ್, ಛತ್ತೀಸ್ ಘಡ, ಉತ್ತರಾಖಂಡ, ಜಾರ್ಖಂಡ್ ಮತ್ತು ತೆಲಂಗಾಣದಿಂದ 41 ಮಂದಿ ಅಭ್ಯರ್ಥಿಗಳು ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತಮಿಳುನಾಡಿನಿಂದ ಚಿದಂಬರಂ ಆಯ್ಕೆಯಾಗಿರುವುದರಿಂದ ಮಹಾರಾಷ್ಟ್ರ ರಾಜ್ಯದಿಂದ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ.