ನವದೆಹಲಿ, ಜೂ 16 (DaijiworldNews/HR): ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಂ.ಆರ್.ಶಾ ಅವರಿಗೆ ಇಂದು ಹೃದಯಾಘಾತವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ದೆಹಲಿಗೆ ಕರೆದೊಯ್ಯಲಾಗುತ್ತಿದೆ ಎಂದು ತಿಳಿದು ಬಂದಿದೆ.
ನ್ಯಾಯಮೂರ್ತಿ ಎಂ.ಆರ್.ಶಾ ಅವರು ಗುರುವಾರ ಹೃದಯಾಘಾತಕ್ಕೆ ಒಳಗಾಗಿದ್ದು, ಹಿಮಾಚಲ ಪ್ರದೇಶದಿಂದ ಏರ್ ಆಂಬ್ಯುಲೆನ್ಸ್ ನಲ್ಲಿ ಅವರನ್ನು ದೆಹಲಿಗೆ ಸಾಗಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.
ಇನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಂ.ಆರ್.ಶಾ ಅವರ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.