ಬೆಂಗಳೂರು, ಜೂ 20 (DaijiworldNews/MS): ಇಂದಿನಿಂದ ಎರಡು ದಿನ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಪ್ರಧಾನಿ ಮೋದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಪ್ರಶ್ನೆಗಳನ್ನು ಮುಂದಿಟ್ಟು ಸ್ವಾಗತಿಸಿದ್ದಾರೆ.
‘ಉತ್ತರ ಹೇಳಿ ಮೋದಿ‘ ಎಂಬ ಹ್ಯಾಶ್ ಟ್ಯಾಗ್ ಬಳಸಿ ಸರಣಿ ಪ್ರಶ್ನೆಗಳನ್ನು ಟ್ವೀಟರ್ ನಲ್ಲಿ ಮುಂದಿಟ್ಟಿದ್ದಾರೆ. ಕನ್ನಡದ ಅಸ್ಮಿತೆಯ ಬಗ್ಗೆ ನಿಮ್ಮ ನಿಲುವೇನು? ಬೆಂಗಳೂರು ನಗರಕ್ಕೆ ಕುಡಿಯುವ ನೀರುಣಿಸುವ ಮೇಕೆದಾಟು ಯೋಜನೆಗೆ ಅನುಮತಿ ನೀಡಲು ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿರುವುದಕ್ಕೆ ಏಕೆ? ಎಂದು ಕೇಳಿದ ಅವರು ಬಾಷೆ, ಎಸ್ಟಿ, ಮೂಲ ಸೌಕರ್ಯ, ಅಂಬೇಡ್ಕರ್ ಸ್ಕೂಲ್, ಕುಡಿಯುವ ನೀರು, ಭಾಷೆ, ಕೃಷಿ ಕಾಯ್ದೆಗಳು, ಮೇಕೆದಾಟು ಯೋಜನೆ, ಗಳೂರು ಉಪನಗರ ರೈಲು ಯೋಜನೆ , ಗುತ್ತಿಗೆ ಕಾಮಗಾರಿಗಳಲ್ಲಿ ಅಕ್ರಮ ಹಾಗೂ ಉದ್ಯೋಗಕ್ಕೆ ಸಂಬಂಧಿಸಿದಂತೆ ಸರಣಿ ಟ್ವೀಟ್ ಗಳನ್ನು ಮುಂದಿಟ್ಟಿದ್ದಾರೆ.
ಸಾವಿರಾರು ಜನರು ಸಿದ್ದರಾಮಯ್ಯ ಅವರು ಕೇಳಿದ ಪ್ರಶ್ನೆಗಳನ್ನು ಶೇರ್ ಮಾಡುತ್ತಿದ್ದಾರೆ.