ನವದೆಹಲಿ, ಜೂ 22 (DaijiworldNews/MS): ಹಿಂದುತ್ವದ ಹೆಸರಿನಲ್ಲಿ ದೇಶದಲ್ಲಿ ಪ್ರಜಾಪ್ರಭುತ್ವ ನಾಶ ಈಗ ಇದು ಜನರಿಗೆ ಅರ್ಥವಾಗುತ್ತಿಲ್ಲ ಆದರೆ, ಮುಂದೊಂದು ದಿನ ವಿಷಾದಿಸುತ್ತಾರೆಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಬುಧವಾರ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಪ್ರಮುಖ ರಾಜಕೀಯ ಬಿಕ್ಕಟ್ಟಿನ ಮಧ್ಯೆ, ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದ ಹಿನ್ನಡೆಗಾಗಿ ಕಾಂಗ್ರೆಸ್ ಈಗ ಬಿಜೆಪಿಯ ಮೇಲೆ ಕಟುವಾದ ದಾಳಿಯನ್ನು ಪ್ರಾರಂಭಿಸಿದ್ದು , ಇದೇ ವಿಚಾರದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು "ಮಹಾರಾಷ್ಟ್ರ ಸರ್ಕಾರವನ್ನು ಉರುಳಿಸಲು ಕೇಸರಿ ಪಕ್ಷವು ಮೊದಲಿನಿಂದಲೂ ಕುದುರೆ ವ್ಯಾಪಾರ ಮತ್ತು ಪಿತೂರಿಗಳನ್ನು ರೂಪಿಸುತ್ತಿದೆ" ಎಂದು ಆರೋಪಿಸಿದ್ದಾರೆ.
ಹಿಂದುತ್ವದ ಹೆಸರಿನಲ್ಲಿ ಆರ್ಎಸ್ಎಸ್ ಮತ್ತು ಬಿಜೆಪಿ ವಾತಾವರಣವನ್ನು ಕಲುಷಿತಗೊಳಿಸಿದ್ದರಿಂದ ದೇಶದಲ್ಲಿ ಪ್ರಜಾಪ್ರಭುತ್ವ ನಾಶವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ದುರಾಸೆಗೆ ಒಳಗಾಗದೇ ಸಂವಿಧಾನದ ಪ್ರಕಾರ ದೇಶವನ್ನು ನಡೆಸಬೇಕು ಎಂದು ಒತ್ತಾಯಿಸಿದ್ದಾರೆ
ಕಾನೂನು ಸುವ್ಯವಸ್ಥೆ ದುರ್ಬಲವಾಗಿರುವಾಗ ಮತ್ತು ಆರ್ಥಿಕತೆ ದುರ್ಬಲವಾಗಿರುವಾಗ ಸರ್ಕಾರ ಪತನಗೊಳ್ಳುವಂತೆ ಮಾಡುತ್ತಿದ್ದಾರೆ. ಎಲ್ಲರೂ ತಮಾಷೆ ಮಾಡುತ್ತಿದ್ದಾರೆಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.