ಮುಂಬೈ, ಜೂ 24 (DaijiworldNews/MS): ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಮತ್ತು ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯನ್ ಅವರ ಸಾವಿನ ರಹಸ್ಯ ಹೊರಬೀಳಬೇಕೆಂದರೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಅವರ ಮಗ ಆದಿತ್ಯ ಠಾಕ್ರೆ, ಸಚಿವ ಸಂಜಯ್ ರಾವುತ್ ಅವರಿಗೆ ಮಂಪರು ಪರೀಕ್ಷೆ ನಡೆಸಿ ಎಂದು ಬಿಹಾರದ ಬಿಜೆಪಿ ನಾಯಕ ನಿಖಿಲ್ ಆನಂದ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಮಹಾ ಸರ್ಕಾರದ ಅಸ್ಥಿರತೆಯ ನಡುವೆಯೇ ಹೇಳಿಕೆ ನೀಡಿದ ಬಿಜೆಪಿ ನಾಯಕ ನಿಖಿಲ್, ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಸುಶಾಂತ್, ದಿಶಾ ಸಾವಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ನಾಶಮಾಡಿರಬಹುದು. ಆದರೆ, ದೇವರ ಮುಂದೆಯಾವುದನ್ನು ಮುಚ್ಚಿಡಲು ಸಾಧ್ಯವಿಲ್ಲ ಎನ್ನುವುದು ನೆನಪಿರಲಿ ಎಂದು ಹೇಳಿದ್ದಾರೆ.
"ಈ ಮೂವರು ರಾಜಕೀಯ ನಾಯಕರ ವಿರುದ್ಧ ಸಾಕ್ಷಿ ಸಂಗ್ರಹಿಸುವಲ್ಲಿ ಸಿಬಿಐ ವಿಫಲವಾಗಿರಬಹುದು. ಆದರೆ ಉದ್ಧವ್ ಠಾಕ್ರೆ,ಆದಿತ್ಯ ಠಾಕ್ರೆ, ಸಚಿವ ಸಂಜಯ್ ರಾವುತ್ ಮಾಡಿರುವ ತಪ್ಪು ದೇವರಿಗೆ ತಿಳಿದಿದೆ. ಅವರನ್ನು ಶಿಕ್ಷಿಸಿ, ರಜಪೂತ್ ಮತ್ತು ಸಾಲಿಯಾನ್ಗೆ ನ್ಯಾಯ ಒದಗಿಸುವಂತೆ ದೇವರನ್ನು ಪ್ರಾರ್ಥಿಸುತ್ತೇನೆ" ಎಂದು ಅವರು ಹೇಳಿದ್ದಾರೆ.
ಜುಲೈ 14,2020ರಲ್ಲಿ ಸುಶಾಂತ್ ಸಿಂಗ್ ರಜಪೂತ್ ಮುಂಬೈನ ತಮ್ಮ ಫ್ಲ್ಯಾಟ್ನಲ್ಲಿ ನಿಗೂಢ ರೀತಿಯಲ್ಲಿ ಸಾವಿಗೀಡಾಗಿದ್ದರು. ಇದಕ್ಕೂ 6 ದಿನಗಳ ಮೊದಲು ಸುಶಾಂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್, ಮುಂಬೈನ ಮಲಾಡ್ ಪ್ರದೇಶದ ಅಪಾರ್ಟ್ಮೆಂಟ್ನಲ್ಲಿ ಮೃತಪಟ್ಟಿದ್ದರು. ಸ್ಥಳೀಯ ಪೊಲೀಸರಿಂದ ಆರಂಭವಾದ ತನಿಖೆ ಸಿಬಿಐ ತನಕ ಬಂದು ನಿಂತಿದೆ. ಆದರೂ, ಇಂದಿಗೂ ಸಾವಿನ ನಿಗೂಢತೆ ಬಯಲಾಗಿಲ್ಲ