ಮುಂಬೈ, ಜೂ 26 (DaijiworldNews/DB): ಬಂಡಾಯ ಶಾಸಕರು ಗುವಾಹಟಿಯಲ್ಲಿ ಎಷ್ಟು ದಿನಗಳ ಕಾಲ ಅಡಗಿಕೊಳ್ಳುತ್ತಾರೆ ಎಂದು ನೋಡೋಣ ಎಂದು ಶಿವಸೇನೆ ವಕ್ತಾರ ಸಂಜಯ್ ರಾವತ್ ಹೇಳಿದ್ದಾರೆ.
ಶಿವಸೇನೆ ಸಲ್ಲಿಸಿರುವ ಅನರ್ಹತೆ ಅರ್ಜಿಯ ಕುರಿತು 16 ಬಂಡಾಯ ಶಾಸಕರಿಗೆ ನೋಟಿಸ್ ನೀಡಿರುವ ಡೆಪ್ಯುಟಿ ಸ್ಪೀಕರ್ ನರಹರಿ ಝಿರ್ವಾಲ್ ಅವರ ಚಿತ್ರವನ್ನು ಒಳಗೊಂಡಂತೆ ಭಾನುವಾರ ಟ್ವೀಟ್ ಮಾಡಿರುವ ರಾವತ್, ಪಕ್ಷದ ಸಚೇತಕ ಸುನಿಲ್ ಪ್ರಭು ಕರೆದ ಸಭೆಗೆ ಗೈರು ಹಾಜರಾಗಿರುವ 16 ಮಂದಿ ಬಂಡಾಯ ಶಾಸಕರಿಗೆ ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್ ನರಹರಿ ಝಿರ್ವಾಲ್ ಅವರು ಶೋಕಾಸ್ ನೊಟೀಸ್ ಜಾರಿಗೊಳಿಸಿದ್ದಾರೆ. ಸೋಮವಾರದೊಳಗೆ ಅವರು ತಮ್ಮ ವಾದ ಮಂಡನೆ ಮಾಡಬೇಕೆಂಬ ಸೂಚನೆ ನೀಡಲಾಗಿದೆ. ಹೀಗಾಗಿ ಆ ಶಾಸಕರುಗಳು ಎಷ್ಟು ದಿನ ಅಡಗಿಕೊಳ್ಳುತ್ತಾರೆ ಎಂಬುದನ್ನು ನೋಡೋಣ ಎಂಬುದಾಗಿ ಹೇಳಿದ್ದಾರೆ.
ಏಕನಾಥ ಶಿಂಧೆ ನೇತೃತ್ವದ ಬಂಡಾಯ ಶಾಸಕರ ಗುಂಪು ಸದ್ಯ ಗುವಾಹಟಿಯ ರಾಡಿಸನ್ ಬ್ಲೂ ಹೋಟೆಲ್ನಲ್ಲಿ ಬೀಡು ಬಿಟ್ಟಿದೆ.