ನವದೆಹಲಿ, ಜು 11 (DaijiworldNews/HR): ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಜುಲೈ 21 ರಂದು ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ ನೀಡಿದೆ.
ಜೂನ್ ನಲ್ಲಿ ಸಮನ್ಸ್ ಮುಂದೂಡುವಂತೆ ಕೋರಿ ಸೋನಿಯಾ ಗಾಂಧಿಯವರ ಲಿಖಿತ ಮನವಿಯನ್ನು ಇಡಿ ಸ್ವೀಕರಿಸಿದ್ದು, ಸೋನಿಯಾ ಅವರು ಕೊರೊನಾ ಮತ್ತು ಶ್ವಾಸಕೋಶದ ಸೋಂಕಿನಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೆ ಕೆಲವು ವಾರಗಳ ಕಾಲ ವಿಚಾರಣೆ ಮುಂದೂಡುವಂತೆ ಕೋರಿ ತನಿಖಾ ಸಂಸ್ಥೆಗೆ ಪತ್ರ ಬರೆದಿದ್ದರು. ್
ಇನ್ನು ಇದಕ್ಕೂ ಮುನ್ನ ಜಾರಿ ನಿರ್ದೇಶನಾಲಯ ಎದುರು ಹಾಜರಾಗುವಂತೆ ಸೋನಿಯಾ ಗಾಂಧಿ ಅವರಿಗೆ ಸೂಚಿಸಲಾಗಿದ್ದು, ಕೊರೋನಾ ಮತ್ತು ಅನಾರೋಗ್ಯದ ಕಾರಣ ಸಮಯ ಕೇಳಿದ್ದರು. ಈಗ ಮತಗ್ತೆ ಹೊಸದಾಗಿ ಸಮನ್ಸ್ ನೀಡಲಾಗಿದೆ.