ಬೆಂಗಳೂರು ,ಜು 14 (DaijiworldNews/HR): ಪ್ರೌಢಶಾಲಾ ಹಂತದಲ್ಲೇ ಮಕ್ಕಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ತಾಂತ್ರಿಕ ಶಿಕ್ಷಣದ ಪ್ರಾಥಮಿಕ ಜ್ಞಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, 60ರ ದಶಕದಲ್ಲಿ ಪ್ರೌಢಶಾಲಾ ಹಂತದಲ್ಲೇ ಮಕ್ಕಳಿಗೆ ತಾಂತ್ರಿಕ ಶಿಕ್ಷಣದ ಜ್ಞಾನ ನೀಡಲಾಗುತ್ತಿತ್ತು. ಆದರೆ ಅದನ್ನು ಈಗ ನಿಲ್ಲಿಸಲಾಯಿತು. ಜೀವನೋಪಾಯಕ್ಕೆ ಅನುಕೂಲವಾಗುವ ತಂತ್ರಜ್ಞಾನದಲ್ಲಿ ಆಸಕ್ತಿಯನ್ನು ಬೆಳೆಸಲು ಇದು ಹೆಚ್ಚು ಅನುಕೂಲವಾಗುವುದರಿಂದ ಮತ್ತೆ ಆರಂಭಿಸಲಾಗುವುದು ಎಂದರು.
ಇನ್ನು 8,9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಪ್ರಾಥಮಿಕ ಜ್ಞಾನ ನೀಡಲಾಗುವುದು. ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ದೇಶದಲ್ಲಿ ನಂ 1 ಆಗಬೇಕು, ವಿಶ್ವದಲ್ಲಿ 10 ರೊಗಳಗಿನ ಸ್ಥಾನವನ್ನು ಪಡೆಯುವ ನಿಟ್ಟಿಲ್ಲಿ ಪ್ರಯತ್ನ ಪಡಬೇಕು ಎಂದು ಹೇಳಿದ್ದಾರೆ.