ನವದೆಹಲಿ, ಜು 15 (DaijiowrldNews/HR): ಇನ್ನು ಮುಂದೆ ಸಂಸತ್ ಭವನದ ಆವರಣದಲ್ಲಿ ಪ್ರತಿಭಟನೆ, ಧರಣಿ, ಉಪವಾಸ ಅಥವಾ ಧಾರ್ಮಿಕ ಸಮಾರಂಭಗಳನ್ನು ನಡೆಸುವಂತಿಲ್ಲ ಎಂದು ರಾಜ್ಯಸಭಾ ಸಚಿವಾಲಯದ ಹೊಸ ಸುತ್ತೋಲೆ ಹೊರಡಿಸಿದೆ.
ಸಂಸತ್ತಿನಲ್ಲಿ ಕೆಲವು ಪದಗಳನ್ನು ಬಳಸಿದ 'ಗಾಗ್ ಆರ್ಡರ್' ಬಗ್ಗೆ ವಿರೋಧ ಪಕ್ಷದ ಆಕ್ರೋಶದ ನಡುವೆಯೇ ಧರಣಿ ಅಥವಾ ಪ್ರತಿಭಟನೆಗಳ ಸುತ್ತೋಲೆ ಬಂದಿದೆ.
ಇನ್ನು ಜುಲೈ 18 ರಿಂದ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುಂಚಿತವಾಗಿ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಪಿಸಿ ಮೋದಿ ಅವರು ಬಿಡುಗಡೆ ಮಾಡಿದ ಹೊಸ ಸುತ್ತೋಲೆಯಲ್ಲಿ ಸದಸ್ಯರ ಸಹಕಾರವನ್ನು ಕೋರಲಾಗಿದೆ.