ಬೆಂಗಳೂರು, ಜು 19 (DaijiworldNews/HR): ಆಗಸ್ಟ್ 11 ರಿಂದ 17 ರವರೆಗೆ ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ ಹಿನ್ನೆಲೆ ರಾಜ್ಯದ ಎಲ್ಲಾ ಶಾಲಾ, ಕಾಲೇಜು, ಮದರಸಾಗಳ ಮೇಲೆ ಕಡ್ಡಾಯವಾಗಿ ರಾಷ್ಟ್ರ ಧ್ವಜ ಹಾರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆದೇಶದ ಪ್ರಕಾರ, ಧ್ವಜಾರೋಹಣದ ಅಭಿಯಾನದೊಂದಿಗೆ ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಮದರಸಾಗಳಲ್ಲಿ ರಾಷ್ಟ್ರಭಕ್ತಿ ಮೂಡಿಸುವ ಸ್ವಾತಂತ್ರ್ಯದ ತ್ಯಾಗ, ಬಲಿದಾನ, ಸ್ಮರಣೆಯ ಗೀತೆ, ಗಾಯನ, ಕ್ವಿಚ್, ಪ್ರಬಂಧ ಸ್ಪರ್ಧೆ, ಸ್ವಾತಂತ್ರ್ಯ ಹೋರಾಟ, ಸ್ವಾತಂತ್ರ್ಯ ಹೋರಾಟಗಾರರ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜಿಸಬೇಕು ಎಂದು ತಿಳಿಸಲಾಗಿದೆ.
ಇನ್ನು ಸರ್ಕಾರದ ಸೌಲಭ್ಯ ಪಡೆಯುವವರು ಸರ್ಕಾರದ ನಿಯಮ ಪಾಲಿಸೋದು ಕಡ್ಡಾಯವಾಗಿದ್ದು, ಎಲ್ಲಾ ಮದರಾಸಗಳಲ್ಲಿ ಕಡ್ಡಾಯವಾಗಿ ರಾಷ್ಟ್ರ ಧ್ವಜ ಹಾರಿಸಬೇಕು ಎಂದು ತಿಳಿಸಿದೆ.