ಬೆಂಗಳೂರು, ಜು 21 (DaijiworldNews/DB): ದೆಹಲಿ ಭೇಟಿ ವೇಳೆ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಜೊತೆ ಮಾತನಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಜುಲೈ 25ರಂದು ನಡೆಯುವ ನೂತನ ರಾಷ್ಟ್ರಪತಿ ಯವರ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ 24ರಂದು ದೆಹಲಿಗೆ ಭೇಟಿ ನೀಡಲಿದ್ದೇನೆ. 25 ಮತ್ತು 27ರಂದು ದೆಹಲಿಯಲ್ಲಿಯೇ ಇರಲಿದ್ದೇನೆ. ಈ ವೇಳೆ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಜೊತೆ ಚರ್ಚಿಸಲಾಗುವುದು ಎಂದರು.
ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿರಂಗನ್ ವರದಿ ಕುರಿತಂತೆ ಚರ್ಚಿಸುವ ಸಲುವಾಗಿ ಕಾರ್ಯಾಗಾರವೊಂದರಲ್ಲಿ ಭಾಗವಹಿಸಲಿದ್ದೇನೆ ಎಂದು ತಿಳಿಸಿದರು.