ಬೆಂಗಳೂರು, ಜು 22(DaijiworldNews/DB): ಮೂರ್ನಾಲ್ಕು ತಲೆಮಾರಿಗಾಗುವಷ್ಟು ಶಕ್ತಿಯನ್ನು ಕಾಂಗ್ರೆಸ್ ನಮಗೆ ನೀಡಿದೆ ಎಂಬ ರಮೇಶ್ ಕುಮಾರ್ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ಆದರೆ ಬಿಜೆಪಿ ಅವರ ಹೇಳಿಕೆಯನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ತಿ ವಿಚಾರವಾಗಿ ಮೂರ್ನಾಲ್ಕು ತಲೆಮಾರಿಗೆ ಬೇಕಾಗುವಷ್ಟು ಮಾಡಲಾಗಿದೆ ಎಂದು ರಮೇಶ್ಕುಮಾರ್ ಹೇಳಿಲ್ಲ. ಅವರು ಅಷ್ಟು ಶಕ್ತಿಯನ್ನು ಗಾಂಧಿ ಕುಟುಂಬ, ಕಾಂಗ್ರೆಸ್ ನಮಗೆ ನೀಡಿದೆ ಎಂಬರ್ಥದಲ್ಲಿ ಹೇಳಿದ್ದಾರೆ. ಆದರೆ ಬಿಜೆಪಿಯು ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥ ಮಾಡಿಕೊಂಡು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಈ ಬಗ್ಗೆ ನಾನು ಚರ್ಚೆಗೆ ಸಿದ್ದ ಎಂದರು.
ಸೋನಿಯಾ ಗಾಂಧಿ ಅವರನ್ನು ಬೆಂಬಲಿಸಿ ರಮೇಶ್ಕುಮಾರ್ ಮಾತನಾಡಿದ್ದಾರೆ ಎಂದವರು ಇದೇ ವೇಳೆ ತಿಳಿಸಿದರು.