ಜಮಖಂಡಿ, ಜು 22 (DaijiworldNews/MS): ಕಾಂಗ್ರೆಸ್ ನ ತಾಯಿ ಬಂಜೆ ಆಗಿದ್ದಾಳೆ ಎನ್ನುವ ಮೂಲಕ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಜಮಖಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ಸಿನ ತಾಯಿ ಬಂಜೆ ಆಗಿದ್ದಾಳೆ. ಗರ್ಭಿಣಿಯೂ ಆಗಲ್ಲ, ಕೂಸನ್ನೂ ಹೆರುವುದಿಲ್ಲ ಕಾಂಗ್ರೆಸ್ ಬಗ್ಗೆ ಕೂಸು ಹುಟ್ಟುವ ಮೊದಲೇ ಕುಲಾಯಿ ಹೊಲಿಸುತ್ತಾರೆ ಅಂತಾರೆ. ನಾನು ಈ ಮಾತನ್ನ ಒಪ್ಪಲ್ಲ. ಗರ್ಭಿಣಿ ಆದರೆ ತಾನೇ ಕುಲಾಯಿ ಹೊಲೆಸುವುದು. ಕಾಂಗ್ರೆಸ್ನಲ್ಲಿ ಕೂಸು ಹುಟ್ಟಲ್ಲ, ಕುಲಾಯಿ ಹೊಲೆಸುವ ಪ್ರಸಂಗವೂ ಬರಲ್ಲ ಎಂಡು ಹೇಳಿದ್ದು ಇದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ.
ಕಾಂಗ್ರೆಸ್ ನಲ್ಲಿ ಎರಡು ಡಜನ್ ಸಿಎಂ ಆಕಾಂಕ್ಷಿಗಳಿದ್ದಾರೆ. ಆ ಪಕ್ಷದೊಳಗೆ ಸಾಕಷ್ಟು ಅಸಮಾಧಾನ ಇದೆ. ಇನ್ನು ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯ ಇಲ್ಲ. ಇದೊಂದು ಮುಳುಗುವ ಹಡಗು ಎಂದು ಲೇವಡಿ ಮಾಡಿದ್ದಾರೆ.
ಸಿದ್ದರಾಮೋತ್ಸವದಿಂದ ಬಿಜೆಪಿಗೆ ಹುಮ್ಮಸ್ಸು, ಆತ್ಮಸ್ಥೈರ್ಯ ಬಂದಿದೆ. ಸಿದ್ದರಾಮೋತ್ಸವ ಅಲ್ಲ, ಸಿದ್ದರಾಮ ಕೊನೆಗಾಲೋತ್ಸವ ಆಗುತ್ತೆ್ ಎಂದು ಲೇವಡಿ ಮಾಡಿದ ಅವರು ಮುಂದೆಯೂ ಬಿಜೆಪಿಯೇ ಅಧಿಕಾರಕ್ಕೆ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.