ಆನೇಕಲ್, ಜು 22 (DaijiworldNews/HR): ಆಟವಾಡುತ್ತಾ ಕುಳಿತಿದ್ದ ಒಂದೂವರೆ ವರ್ಷದ ಕಂದಮ್ಮಆಕಸ್ಮಿಕವಾಗಿ ತಂದೆ ಚಾಲನೆ ಮಾಡುತ್ತಿದ್ದ ವಾಹನಕ್ಕೇ ಸಿಲುಕಿ ಬಲಿಯಾಗಿರುವ ಘಟನೆ ಸರ್ಜಾಪುರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಮನಹಳ್ಳಿಯಲ್ಲಿ ನಡೆದಿದೆ.
ಬಾಲಕೃಷ್ಣ ಎಂಬುವರ ಮಗಳು ಮನಿಶಾ ದೇವಿ ಮೃತ ಕಂದಮ್ಮ.
ಇಚರ್ ವಾಹನ ಚಾಲಕರಾಗಿರುವ ಬಾಲಕೃಷ್ಣ ಅವರು ಮನೆ ಬಳಿ ವಾಹನ ರಿವರ್ಸ್ ತೆಗೆದುಕೊಳ್ಳಲು ಹೋದಾಗ ಆಕಸ್ಮಿಕವಾಗಿ ಮನಿಶಾ ವಾಹನಕ್ಕೆ ಸಿಲುಕಿ ಮೃತಪಟ್ಟಿದ್ದಾಳೆ.
ಇನ್ನು ಸರ್ಜಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.