ಕೊಪ್ಪಳ, ಜು 25 (DaijiworldNews/HR): ನಾವು ಪಕ್ಷದ ಸಿದ್ದಾಂತ, ಅಭಿವೃದ್ದಿಯಿಂದ ಚುನಾವಣೆಯಲ್ಲಿ ಗೆಲ್ಲಲಿದ್ದೇವೆ. ಮುಂದಿನ ಬಾರಿ ಖಂಡಿತವಾಗಿಯೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಕೊಪ್ಪಳದ ಗವಿಮಠಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಶಿಕಾರಿಪುರ ಸ್ಪರ್ಧೆ ವಿಚಾರದಲ್ಲಿ ಗೊಂದಲವಿಲ್ಲ. ಶಿಕಾರಿಪುರ ಕ್ಷೇತ್ರದ ಜೊತೆಗೆ ಯಡಿಯೂರಪ್ಪರಿಗೆ ನಿಕಟ ಸಂಪರ್ಕವಿದ್ದು, ಅಲ್ಲಿ ಕಾರ್ಯಕರ್ತರು ಮುಖಂಡರ ಒತ್ತಾಸೆಯಂತೆ ಕ್ಷೇತ್ರ ಬಿಟ್ಟು ಕೊಡುವ ಘೋಷಣೆ ಮಾಡಿದ್ದಾರೆ ಎಂದರು.
ನೀವು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಿರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನನಗೆ ಇಡೀ ಕರ್ನಾಟಕದ ಮೇಲೆ ಒಲವುವಿದೆ. ಹೀಗಾಗಿ ಬಿಜೆಪಿ ನನಗೆ ನನ್ನ ಕುಟುಂಬಕ್ಕೆ ಎಲ್ಲವನ್ನೂ ನೀಡಿದೆ ಎಂದಿದ್ದಾರೆ.
ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿಗಾಗಿ ಕಿತ್ತಾಟ ನಡೆಸುತ್ತಿರುವುದು ಹಾಸ್ಯಾಸ್ಪದವಾಗಿದೆ. ಕಾಂಗ್ರೆಸ್ನ ಕಿತ್ತಾಟದಿಂದ ಬಿಜೆಪಿಗೆ ಒಳ್ಳೆಯದೆ ಆದರೆ ಈ ಕಿತ್ತಾಟದ ಲಾಭ ಮಾಡಿಕೊಳ್ಳಲು ಬಿಜೆಪಿ ಇಷ್ಟ ಪಡುವುದಿಲ್ಲ ಎಂದು ಹೇಳಿದ್ದಾರೆ.