ನವದೆಹಲಿ, ಜು 27 (DaijiworldNews/MS): ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು "ರಾಷ್ಟ್ರಪತ್ನಿ " ಎಂದು ಕರೆದ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆಗೆ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈ ಬಗ್ಗೆ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಪಟ್ಟು ಹಿಡಿದಿದೆ.
ಇನ್ನೊಂದೆಡೆ ಇದೇ ವಿಚಾರವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆದಿದ್ದು ಫಲಕಗಳನ್ನು ಹಿಡಿದ ಬಿಜೆಪಿ ಸಂಸದರು, ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚೌಧುರಿ ಅವರ ಹೇಳಿಕೆ 'ಸೆಕ್ಸಿಸ್ಟ್ ಅವಮಾನ' ಎಂದು ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಕಿಡಿಕಾರಿದ್ದಾರೆ.
ಇದಲ್ಲದೆ ಮುರ್ಮು ಅವರನ್ನು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧುರಿ ಅವರು 'ರಾಷ್ಟ್ರಪತ್ನಿ" ಎಂದು ಸಂಬೋಧಿಸುವ ಮೂಲಕ ಅವರನ್ನು ಅವಮಾನಿಸಿದ್ದಾರೆ ಎಂದು ಇರಾನಿ ಆರೋಪಿಸಿದ್ದಾರೆ.