ಬೆಂಗಳೂರು, ಜು 27 (DaijiworldNews/MS) : ಪಿಎಫ್ಐ ಸಂಘಟನೆ ಬ್ಯಾನ್ ಮಾಡುವ ಬಗ್ಗೆ ಕೇಂದ್ರ ಗೃಹ ಇಲಾಖೆಯೊಂದಿಗೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, " ಪಿಎಫ್ಐ, ಎಸ್ಡಿಪಿಐ ಸಂಘಟನೆಯವರು ಹಲವಾರು ಕ್ರಿಮಿನಲ್ ಕೃತ್ಯದಲ್ಲಿ ತೊಡಗಿಸಿಕೊಂಡಿರುವ ಉದಾಹರಣೆ ಇದೆ. ಪ್ರವೀಣ್ ನೆಟ್ಟಾರ್ ಹತ್ಯೆ ಹಿಂದೆಯೂ ಇಂತವರ ಕೈವಾಡ ಇದೆ. ಪಿಎಫ್ಐ ಚಟುವಟಿಕೆಗಳ ಮೇಲೆ ರಾಷ್ಟ್ರಮಟ್ಟದಲ್ಲಿ ನಿಗಾ ಇಡಬೇಕಾಗಿದೆ. ಇಂತಹ ಸಂಘಟನೆಗಳನ್ನ ರಾಷ್ಟ್ರಮಟ್ಟದಲ್ಲಿಯೇ ಬ್ಯಾನ್ ಮಾಡಬೇಕು ಎಂಬ ಅಭಿಪ್ರಾಯ ಬೊಮ್ಮಾಯಿ ಅವರದ್ದು" ಎಂದು ಜೋಶಿ ತಿಳಿಸಿದ್ದಾರೆ.
ಪ್ರವೀಣ್ ಹತ್ಯೆಯಿಂದಾಗಿ ರಾಜ್ಯರ ಕೆಂಗಣ್ಣೀಗೆ ಗುರಿಯಾದ ಬೆನ್ನಲ್ಲೇ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರೊಂದಿಗೆ ಚರ್ಚಿಸಿದ್ದಾರೆ.