ಚಿಕ್ಕಬಳ್ಳಾಪುರ, ಆ 01(DaijiworldNews/MS): ಭಾನುವಾರ ರಾತ್ರಿ 10ರ ಸುಮಾರಿನಲ್ಲಿ ಸಿಕ್ಕ ಸಿಕ್ಕವರ ಮೇಲೆ ಲಾಂಗ್ ಬೀಸಿದ ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ ಪೊಲೀಸರಿಂದ ಆರೋಪಿ ಅರ್ಜುನ್ ಎಂಬಾತನನ್ನು ಬಂಧಿಸಲಾಗಿದೆ.
ಬೈಕ್ ನಲ್ಲಿ ಹೆಲ್ಮೆಟ್ ಧರಿಸಿ ಬಂಧಿದ್ದ ದುಷ್ಕರ್ಮಿ ನಗರಸಭೆ, ಕಾರ್ಖಾನೆ ಪೇಟೆ, ಬಿಬಿ ರಸ್ತೆ, ಅಂಬಿಕಾ ಮೆಡಿಕಲ್ಸ್ ಮತ್ತಿತರ ಪ್ರದೇಶದಲ್ಲಿ ನಿಂತಿದ್ದ ಸುಮಾರು 15ಕ್ಕೂ ಹೆಚ್ಚು ಜನರ ಮೇಲೆ ಲಾಂಗ್ ಬೀಸಿ ಪರಾರಿ ಆಗಿದ್ದ.
ಲಾಂಗ್ ಏಟಿಗೆ ಮೂವರು ಮಹಿಳೆಯರು, ನಾಲ್ಕು ಜನ ಪುರುಷರು ಸೇರಿ ಒಟ್ಟು 7 ಜನ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳಲ್ಲಿ ಮುನಿರೆಡ್ಡಿ ಎನ್ನುವವರ ಸ್ಥಿತಿ ಚಿಂತಾಜನಕವಾಗಿದೆ. ಒಬ್ಬರ ಕಣ್ಣಿನ ಗುಡ್ಡೆ ಕಿತ್ತು ಬಂದಿದೆ.
ತಕ್ಷಣ ಆರೋಪಿಗೆ ಬಲೆ ಬೀಸಿದ ಪೊಲೀಸರು ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ ಪೊಲೀಸರಿಂದ ಆರೋಪಿ ಅರ್ಜುನ್ ಎಂಬಾತನನ್ನು ಚಿಕ್ಕಬಳ್ಳಾಪುರ ತಾಲೂಕಿನ ಕಳವಾರ ದೇವಸ್ಥಾನದ ಬಳಿ ಬಂಧಿಸಲಾಗಿದೆ. ಈತ ಚಿಕ್ಕಬಳ್ಳಾಪುರ ನಗರ ಠಾಣೆ ರೌಡಿ ಶೀಟರ್ ಆಗಿದ್ದ. ಈತನ ಬಳಿಯಿಂದ ಚಾಕು, ಮಚ್ಚು, ಲಾಂಗ್ಗಳು ಸೇರಿ ಬೈಕ್ ಜಪ್ತಿ ಮಾಡಲಾಗಿದೆ.