ತಿರುವನಂತಪುರಂ, ಆ 06 (DaijiworldNews/HR): ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದ್ದು, ಈ ವೇಳೆ ಮಹಿಳೆಯೊಬ್ಬರು ಕಾಡಿನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ.
ಮಳೆಯಿಂದಾಗಿ 2 ಸಾವಿರಕ್ಕೂ ಅಧಿಕ ಮಂದಿ ಪರಿಹಾರ ಶಿಬಿರಗಳಲ್ಲಿದ್ದು, ಭಾರೀ ಮಳೆಗೆ 3 ಗರ್ಭಿಣಿಯರು ಕಾಡಿನಲ್ಲಿ ಸಿಲುಕಿಕೊಂಡಿದ್ದು, ಸದ್ಯ ಅವರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ.
ಇನ್ನು ಇದೇ ವೇಳೆ ಮಹಿಳೆಯೊಬ್ಬರು ಕಾಡಿನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಘಟನೆಯ ಬಗ್ಗೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ಪಡೆದು, ಗರ್ಭಿಣಿಯರನ್ನು ರಕ್ಷಿಸಿದ ತಂಡವನ್ನು ಅಭಿನಂದಿಸಿದ್ದಾರೆ.