ಉತ್ತರ ಪ್ರದೇಶ, ಆ 08 (DaijiworldNews/DB): ಉತ್ತರ ಪ್ರದೇಶದ ಮೈನ್ ಪುರಿಯಲ್ಲಿ ಸಮಾಜವಾದಿ ಪಕ್ಷದ ನಾಯಕ ದೇವೇಂದ್ರ ಸಿಂಗ್ ಯಾದವ್ ಅವರ ಕಾರಿಗೆ ಟ್ರಕ್ ಢಿಕ್ಕಿ ಹೊಡೆದು 500 ಮೀಟರ್ಗಳಿಗೂ ಹೆಚ್ಚು ದೂರ ಎಳೆದೊಯ್ದ ಘಟನೆ ನಿನ್ನೆ ತಡರಾತ್ರಿ ನಡೆದಿದೆ.
ಟ್ರಕ್ ಕಾರಿಗೆ ಢಿಕ್ಕಿ ಹೊಡೆದು ಎಳೆದೊಯ್ಯುವುದನ್ನು ಸ್ಥಳದಲ್ಲಿದ್ದವರು ನೋಡಿದ್ದಾರೆ. ಇದರಿಂದ ಆತಂಕಗೊಂಡ ಸ್ಥಳದಲ್ಲಿದ್ದವರು ಎಸ್ಪಿ ನಾಯಕನನ್ನು ರಕ್ಷಿಸಲು ಯತ್ನಿಸಿದ್ದಾರೆ. ಯಾದವ್ ಅವರು ಎಸ್ಪಿಯ ಜಿಲ್ಲಾಧ್ಯಕ್ಷರಾಗಿದ್ದು, ಪಕ್ಷದ ಕಚೇರಿಯಿಂದ ರಾತ್ರಿ ಮನೆಗೆ ಹಿಂತಿರುಗುವ ವೇಳೆ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಟ್ರಕ್ ಚಾಲಕ ಇಟಾವಾ ಮೂಲದವನು ಎನ್ನಲಾಗಿದೆ. ಆತನನ್ನು ಪೊಲೀಸರು ಬಂಧಿಸಿದ್ದು, ತನಿಖೆ ಕೈಗೆತ್ತಿಕೊಳ್ಳಲಾಗಿದೆ ಎಂದು ಎಸ್ಪಿ ಮೈನ್ಪುರಿ ಕಮಲೇಶ್ ದೀಕ್ಷಿತ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.