ಪಶ್ಚಿಮ ಬಂಗಾಳ, ಆ 11 (DaijiworldNews/HR): ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಪಶ್ಚಿಮ ಬಂಗಾಳದ ಎಂಟು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಮನ್ಸ್ ನೀಡಿದ್ದಾರೆ.
ಐಪಿಎಸ್ ಅಧಿಕಾರಿಗಳಲ್ಲಿ ಜ್ಞಾನವಂತ್ ಸಿಂಗ್, ಕೋಟೇಶ್ವರ ರಾವ್, ಎಸ್ ಸೆಲ್ವಮುರುಗನ್, ಶ್ಯಾಮ್ ಸಿಂಗ್, ರಾಜೀವ್ ಮಿಶ್ರಾ, ಸುಕೇಶ್ ಕುಮಾರ್ ಜೈನ್ ಮತ್ತು ತಥಾಗತ ಬಸು ಸೇರಿದ್ದಾರೆ.
ಇನ್ನು ಈ ಐಪಿಎಸ್ ಅಧಿಕಾರಿಗಳು ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣದಲ್ಲಿ ಪಾತ್ರ ವಹಿಸಿದ್ದು, ಈ ಅಧಿಕಾರಿಗಳು ಹಗರಣದಿಂದ ಲಾಭ ಪಡೆದಿದ್ದಾರೆ ಎಂಬುದಕ್ಕೆ ಪುರಾವೆಗಳಿವೆ ಎನ್ನಲಾಗಿದೆ.