ಶಿವಮೊಗ್ಗ, ಆ 15 (DaijiworldNews/HR): ಸಾವರ್ಕರ್ ಮತ್ತು ಟಿಪ್ಪು ಫೋಟೋ ವಿಷಯಕ್ಕೆ ವಿವಾದ ಹುಟ್ಟಿಕೊಂಡಿರುವ ಬೆನ್ನಲ್ಲೇ ಯುವಕನೊಬ್ಬನಿಗೆ ಚಾಕು ಇರುದ ಘಟನೆ ಉಪ್ಪಾರ ಕೇರಿ ನಡೆದಿದೆ.
ಪ್ರೇಮ್ ಕುಮಾರ್(22) ಎಂಬ ಯುವಕನಿಗೆ ಚೂರಿ ಹಾಕಲಾಗಿದೆ.
ಗಾಯಾಳು ಪ್ರೇಮ್ ಕುಮಾರ್ ಮೆಗ್ಗಾನ್ ಆಸ್ಪತ್ರೆಯಲ್ಲಿ ತುರ್ತು ನಿಗ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಇನ್ನು ಸಾವರ್ಕರ್ ಮತ್ತು ಟಿಪ್ಪು ಫೋಟೋ ವಿವಾದದಿಂದಾಗಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಈಗಾಗಲೇ ಸೆಕ್ಷನ್ 144 ನಿಷೇದಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಗಾಂಧಿಬಜಾರ್ ಅಂಗಡಿಗಳನ್ನು ಬಂದ್ ಮಾಡಲಾಗಿದೆ.