ನವದೆಹಲಿ, ಆ 16 (daijiworldNews/HR): ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿ ಹಿನ್ನಲೆಯಲ್ಲಿ ಇಂದು ನವದೆಹಲಿಯ ವಾಜಪೇಯಿ ಸ್ಮಾರಕ ಸದೈವ್ ಅಟಲ್ಗೆ ಭೇಟಿ ನೀಡಿ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.
ನವದೆಹಲಿಯ ವಾಜಪೇಯಿ ಸ್ಮಾರಕ ಸದೈವ್ ಅಟಲ್ಗೆ ಇಂದು ಅನೇಕ ಗಣ್ಯರು ಬೇಟಿ ನೀಡಿ ಗೌರವ ನಮನ ಸಲ್ಲಿಸಿದ್ದಾರೆ.
ಇನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ಖರ್, ಸ್ಪೀಕರ್ ಓಂ ಬಿರ್ಲಾ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮೊದಲಾದವರು ಭೇಟಿ ನೀಡಿ ನಮನ ಸಲ್ಲಿಸಿದರು.