ನವದೆಹಲಿ, ಆ 16 (DaijiworldNews/DB): ಆಳವಾದ ಕಮರಿಗೆ ಬಸ್ ಬಿದ್ದು ನಾಲ್ವರು ಐಟಿಬಿಪಿ ಸಿಬಂದಿ ಸಾವನ್ನಪಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ಸಂಭವಿಸಿದೆ. ಘಟನೆಯಲ್ಲಿ ಅಮರನಾಥ ಯಾತ್ರೆಯ ಕರ್ತವ್ಯದಿಂದ ಹಿಂದಿರುಗುತ್ತಿದ್ದ 37 ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಚಂದನ್ವರಿಯಿಂದ ಶ್ರೀನಗರದ ಪೊಲೀಸ್ ನಿಯಂತ್ರಣ ಕೊಠಡಿಗೆ ಬಸ್ ಸಂಚರಿಸುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಐಟಿಬಿಪಿಯ 37 ಹಾಗೂ ಜಮ್ಮು ಮತ್ತು ಕಾಶ್ಮೀರದ ಇಬ್ಬರು ಪೊಲೀಸರನ್ನು ಹೊತ್ತು ಸಿವಿಲ್ ಬಸ್ ತೆರಳುತ್ತಿತ್ತು. ಈ ವೇಳೆ ನದಿಪಾತ್ರಕ್ಕೆ ಬಸ್ ಉರುಳಿ ಬಿದ್ದು ಘಟನೆ ಸಂಭವಿಸಿದೆ ಎಂದು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಗಾಯಾಳುಗಳನ್ನು ಎಸ್ಡಿಎಚ್ ಪಹಲ್ಗಾಮ್ಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.