ದೆಹಲಿ, ಆ 22 (DaijiworldNews/HR): ಬಿಜೆಪಿ ಸೇರ್ಪಡೆಗೊಂಡರೆ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯದ ಪ್ರಕರಣಗಳನ್ನು ಕ್ಲೋಸ್ ಮಾಡಲಾಗುತ್ತದೆ ಎಂಬ ಆಫರ್ ತಮಗೆ ನೀಡಲಾಗಿತ್ತು ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿ ಸ್ಪೋಟಕ್ ಮಾಹಿತಿ ಬಿಚ್ಚಿಟ್ಟಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಜೆಪಿ ಸೇರ್ಪಡೆಗೊಂಡರೆ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯದ ಪ್ರಕರಣಗಳನ್ನು ಕ್ಲೋಸ್ ಮಾಡಲಾಗುತ್ತದೆ ಎಂಬ ಆಫರ್ ತಮಗೆ ನೀಡಲಾಗಿತ್ತು. ಆದರೆ ಯಾವುದೇ ಕಾರಣಕ್ಕೂ ತಾವು ಬಿಜೆಪಿ ಸೇರ್ಪಡೆಗೊಳ್ಳುವುದಿಲ್ಲ. ನನ್ನ ವಿರುದ್ಧ ದಾಖಲಾಗಿರುವ ಪ್ರಕರಣಗಳು ಸುಳ್ಳು ಎಂದಿರುವ ಅವರು, ನನ್ನ ತಲೆ ಕತ್ತರಿಸಿಕೊಳ್ಳಲು ಸಿದ್ಧನಿದ್ದೇನೆ ಹೊರತು ಭ್ರಷ್ಟರ ಜೊತೆ ಕೈಜೋಡಿಸುವುದಿಲ್ಲ ಎಂದಿದ್ದಾರೆ.
ಇನ್ನು ಮನೀಶ್ ಸಿಸೋಡಿಯಾ ಕಚೇರಿ ಹಾಗೂ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಬಂಧನದ ಭೀತಿ ಎದುರಿಸುತ್ತಿದ್ದಾರೆ.