ಜೈಪುರ, ಆ 23 (DaijiworldNews/DB): ಭಾರತೀಯ ವಾಯುಪಡೆಯ ಎಂಐ-35 ದಾಳಿಯ (ಐಎಎಫ್) ಹೆಲಿಕಾಪ್ಟರ್ ತಾಂತ್ರಿಕ ದೋಷದ ಕಾರಣದಿಂದ ರಾಜಸ್ಥಾನದ ಹನುಮಾನ್ಗಢ ಜಿಲ್ಲೆಯ ಹಳ್ಳಿಯೊಂದರ ಜಮೀನಿನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.
ಹೆಲಿಕಾಪ್ಟರ್ನಲ್ಲಿದ್ದ ಎಲ್ಲಾ ಸಿಬಂದಿ ಸುರಕ್ಷಿತವಾಗಿದ್ದಾರೆ. ಹೆಲಿಕಾಪ್ಟರ್ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಕಾರಣ ಹಳ್ಳಿಯ ಜಮೀನಿನಲ್ಲೇ ತುರ್ತು ಭೂಸ್ಪರ್ಶ ಮಾಡಬೇಕಾಗಿ ಬಂತು.
ಮುನ್ನೆಚ್ಚರಿಕಾ ಕ್ರಮವಾಗಿ ಹೀಗೆ ಮಾಡಲಾಗಿದೆ ಎಂದು ಸಂಗಾರಿಯಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಹನುಮನರಾಮ್ ವಿಷ್ಣೋಯ್ ತಿಳಿಸಿರುವುದಾಗಿ ವರದಿಯಾಗಿದೆ.