ನವದೆಹಲಿ, ಆ 29 (DaijiworldNews/HR): ರಾಷ್ಟ್ರೀಯ ಷೇರುಪೇಟೆ(ಎನ್ಎಸ್ಇ)ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬಂಧನದಲ್ಲಿರುವ ಎನ್ಎಸ್ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅವರಿಗೆ ದೆಹಲಿ ಸಿಬಿಐ ವಿಶೇಷ ನ್ಯಾಯಾಲಯವು ಜಾಮೀನು ನೀಡಲು ನಿರಾಕರಿಸಿದೆ.
ಚಿತ್ರಾ ಅವರ ಪ್ರಕರಣ ಎನ್ಎಸ್ಇ ಇತಿಹಾಸದಲ್ಲಿ ಕಪ್ಪು ಚುಕ್ಕೆ ಎಂದು ಜಾಮೀನು ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾ. ಸುನೇನಾ ಶರ್ಮಾ ಹೇಳಿದ್ದಾರೆ.
ಇನ್ನು ರಾಷ್ಟ್ರೀಯ ಷೇರುಪೇಟೆ(ಎನ್ಎಸ್ಇ)ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೈಗೆತ್ತಿಕೊಂಡಿದ್ದ ಸಿಬಿಐ, ಚಿತ್ರಾ ಅವರನ್ನು ಕಳೆದ ಮಾರ್ಚ್ 6 ರಂದು ಬಂಧಿಸಿತ್ತು.