ಬೆಳಗಾವಿ, ಆ 31 (DaijiworldNews/DB): ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಕಾರು ಬೆಳಗಾವಿ ಜಿಲ್ಲೆಯ ಹಾರೂಗೇರಿ ಬಳಿ ಬುಧವಾರ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಲಕ್ಷ್ಮಣ್ ಸವದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸವದಿ ಸೇರಿದಂತೆ ನಾಲ್ವರು ಅಥಣಿಯಿಂದ ಬೆಳಗಾವಿಗೆ ಕಾರಿನಲ್ಲಿ ಸಂಚರಿಸುತ್ತಿದ್ದರು. ಈ ವೇಲೆ ಹಾರೂಗೇರಿ ಬಳಿ ಕಾರು ಬೈಕ್ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿದ್ದ ನಾಲ್ವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರೊಳಗಿದ್ದ ಲಕ್ಷ್ಮಣ ಸವದಿ, ಕಾರು ಚಾಲಕ, ಗನ್ ಮ್ಯಾನ್ ಸೇರಿದಂತೆ ನಾಲ್ವರನ್ನು ಕೂಡಾ ಸ್ಥಳೀಯರ ಸಹಕಾರದೊಂದಿಗೆ ಕಾರಿನಿಂದ ಹೊರಗೆ ಕರೆ ತರಲಾಯಿತು.ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.