ನವದೆಹಲಿ, ಸೆ 06 (DaijiworldNews/HR): ನಾವು ಸ್ನೇಹದಿಂದ ಯಾವುದೇ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದು ಎಂದು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮಂಗಳವಾರ ಹೇಳಿದ್ದಾರೆ.
ನಾಲ್ಕು ದಿನಗಳ ಭಾರತ ಪ್ರವಾಸದಲ್ಲಿರುವ ಅವರನ್ನು ರಾಷ್ಟ್ರಪತಿ ಭವನದ ಮುಂಭಾಗ ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದು, ಈ ವೇಳೆ ಮಾತನಾಡಿದ ಶೇಖ್ ಹಸೀನಾ, ಉಭಯ ದೇಶಗಳ ಜನರ ಜೀವನ ಮಟ್ಟ ಸುಧಾರಣೆ, ಬಡತನ ನಿರ್ಮೂಲನೆ ಮತ್ತು ಆರ್ಥಿಕ ಅಭಿವೃದ್ಧಿ ಕುರಿತು ಮೋದಿ ಜತೆ ಚರ್ಚಿಸಲಾಗುವುದು ಎಂದರು.
ಇನ್ನು ನಮ್ಮ ಪ್ರಮುಖ ಗುರಿ ಆರ್ಥಿಕತೆಯನ್ನು ಅಭಿವೃದ್ಧಿಪಡಿಸಿ ಜನರ ಮೂಲಭೂತ ಅಗತ್ಯಗಳನ್ನು ಪೂರೈಸುವುದಾಗಿದ್ದು, ಸ್ನೇಹದಿಂದ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.