ಬೆಂಗಳೂರು, ಸೆ 07 (DaijiworldNews/HR): ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನರಾಗಿರುವ ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರ ಪಾರ್ಥೀವ ಶರೀರವನ್ನು ಏರ್ಲಿಫ್ಟ್ ಮೂಲಕ ಬೆಳಗಾವಿಗೆ ಒಯ್ಯಲು ಸಿದ್ಧತೆ ನಡೆಸಲಾಗುತ್ತಿದೆ.
ಈಗ ಉಮೇಶ್ ಕತ್ತಿ ಅವರ ಪಾರ್ಥೀವ ಶರೀರ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿದ್ದು, ಅಲ್ಲಿಂದ ಎಚ್ಎಎಲ್ ವಿಮಾನ ನಿಲ್ದಾಣದಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಏರ್ಲಿಫ್ಟ್ ಮೂಲಕ ಕರೆದೊಯ್ಯಲಾಗುತ್ತಿದೆ.
ಇನ್ನು ಮಧ್ಯಾಹ್ನ 3.30ವರೆಗೂ ಹುಕ್ಕೇರಿಯ ಬೆಲ್ಲದ ಬಾಗೇವಾಡಿ ಹೊರಹೊಲದಲ್ಲಿ ವಿಶ್ವರಾಜ್ ಸಕ್ಕರಾಜ್ ಸಕ್ಕರೆ ಕಾರ್ಖಾನೆಯಲ್ಲಿ ಅಂತಿಮ ದರ್ಶನ ಪಡೆದುಕೊಳ್ಳಲು ತಯಾರಿ ನಡೆಸಲಾಗುತ್ತಿದೆ.
ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ 10.30ರ ಸುಮಾರಿಗೆ ಬಾತ್ ರೂಮ್ ಗೆ ತೆರಳಿದ್ದಾಗ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.