ಬೆಂಗಳೂರು, ಸೆ 07 (DaijiworldNews/MS): ಕಳೆದ ವಾರ ಪ್ರವಾಹದಿಂದ ಬೆಂಗಳೂರು- ಮೈಸೂರು ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಆದರೆ ಇದೀಗ ಹೆದ್ದಾರಿ ವಿಚಾರಕ್ಕೆ ಸಂಬಂಧಿಸಿ ಕರ್ನಾಟಕ ಬಿಜೆಪಿ ಘಟಕ ಹೊಸ ಟ್ವೀಟ್ ಮಾಡಿದೆ.
ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯ 23 ಕಿ.ಮೀ. ಉದ್ದದ ಬೈಪಾಸ್ ರಸ್ತೆಯ ಕಾಮಗಾರಿ ಮುಕ್ತಾಯವಾಗಿದ್ದು ಸಾರ್ವಜನಿಕರ ಓಡಾಟಕ್ಕೆ ಸಿದ್ಧವಾಗಿದೆ ಎಂದು ಕರ್ನಾಟಕ ಬಿಜೆಪಿ ಪ್ರಕಟಿಸಿದೆ.
ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ ನಲ್ಲಿ ಸಂಚಾರಕ್ಕೆ ಮುಕ್ತವಾಗಿರುವ ಬೈಪಾಸ್ ನ ವಿಡಿಯೋವನ್ನು ಅಪ್ಲೋಡ್ ಮಾಡಿ, "ನಿಮ್ದೇ ಈ ಹೈವೆ" ಎಂದು ಹೇಳಿದೆ.
ವಿಡಿಯೋ ಹಾಕುವುದರ ಜೊತೆಗೆ ಕಾಂಗ್ರೆಸ್ ಹಾಗೂ ವಿಪಕ್ಷಗಳಿಗೆ ಪರೋಕ್ಷವಾಗಿ ಟಾಂಗ್ ನೀಡಿರುವ ಪಕ್ಷ, ‘ಆರೋಪಗಳಿಗೆ ಅಭಿವೃದ್ಧಿಯ ಮೂಲಕ ಉತ್ತರ ಕೊಡುವುದು ಬಿಜೆಪಿಯ ಗುಣ. ಪ್ರಧಾನಿ ಶ್ರೀ ಪ್ರಧಾನಿ ನರೇಂದ್ರ ಮೋದಿಯವರ ಕನಸು ಮತ್ತು ಬೊಮ್ಮಾಯಿ ಸರ್ಕಾರದ ಒತ್ತಾಸೆಯ ಫಲ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ 23 ಕಿ.ಮೀ. ಬೈಪಾಸ್ ಸಾರ್ವಜನಿಕರ ಓಡಾಟಕ್ಕೆ ಮುಕ್ತವಾಗಿದೆ’ ಎಂದು ಹೇಳಿದೆ. ಜೊತೆಗೆ, #ಜನಸ್ನೇಹಿಬಿಜೆಪಿಸರ್ಕಾರ ಎಂಬ ಹ್ಯಾಶ್ ಟ್ಯಾಗ್ ಅನ್ನೂ ಬಳಸಿದೆ.