ಬೆಂಗಳೂರು, ಸೆ 15 (DaijiworldNews/MS): ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ.) ಸಮನ್ಸ್ ಜಾರಿ ಮಾಡಿದೆ.ಇದೇ 19ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಸೂಚಿಸಿದೆ.
ಆದರೆ ಈ ವಿಚಾರವಾಗಿ ’ ಭಾರತ ಜೋಡೋ ಯಾತ್ರೆ, ವಿಧಾನಸಭಾ ಕಲಾಪದ ನಡುವೆ ಸಮನ್ಸ್ ನೀಡಿರುವುದಕ್ಕೆ ಡಿಕೆಶಿ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ್ದು "ಭಾರತ ಜೋಡೋ ಯಾತ್ರೆಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ್ ನೀಡಿದೆ. ನಾನು ತನಿಖೆಗೆ ಸಹಕರಿಸಲು ಸಿದ್ಧ. ಆದರೆ, ಈ ಸಮನ್ಸ್ ನೀಡಿರುವ ಸಮಯ, ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ" ಎಂದಿದ್ದಾರೆ.
ದೆಹಲಿಯ ಸಫ್ದರ್ಜಂಗ್ ಎನ್ಕ್ಲೇವ್ನಲ್ಲಿರುವ ಡಿ.ಕೆ. ಶಿವಕುಮಾರ್ ಒಡೆತನದ ನಿವಾಸದಲ್ಲಿ ನಗದು ದೊರೆತಿದ್ದರಿಂದ, ಐಪಿಸಿಯ ಸೆಕ್ಷನ್ 120 'ಬಿ' ಅಡಿಯಲ್ಲಿ ಡಿಕೆಶಿ ವಿರುದ್ದ ಪ್ರಕರಣ ದಾಖಲಿಸಲಾಗಿದೆ.