ಬೆಂಗಳೂರು, ಸೆ 16 (DaijiworldNews/MS): ಬಡವರ ಹಸಿವು ನೀಗಿಸಲು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ ಮುಚ್ಚಲು ಹುನ್ನಾರ ಮಾಡಲಾಗುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಮ್ಮ ಸರ್ಕಾರ ಪ್ರಾರಂಭಿಸಿದ್ದ ಇಂದಿರಾ_ಕ್ಯಾಂಟೀನ್ ಗಳಿಗೆ ಅನುದಾನ ನೀಡದೆ ಬಿಜೆಪಿ ಸರ್ಕಾರ ಬಡವರ ಹೊಟ್ಟೆಗೆ ಹೊಡೆಯಲು ಹೊರಟಿದೆ.2017-2018, 2018-19ರಲ್ಲಿ ಕ್ರಮವಾಗಿ ರೂ.100 ಮತ್ತು ರೂ.145 ಕೋಟಿ ಅನುದಾನ ನೀಡಿದ್ದ ಬಿಬಿಎಂಪಿ ಈ ವರ್ಷ ಕೊಟ್ಟಿದ್ದು ಕೇವಲ ರೂ.60 ಕೋಟಿ. ಕಳಪೆ ದರ್ಜೆಯ ಊಟ-ತಿಂಡಿ ನೀಡಿ ಜನ ಬರುವುದಿಲ್ಲ ಎಂಬ ನೆಪವೊಡ್ಡಿ ಇಂದಿರಾ ಕ್ಯಾಂಟೀನ್ ಮುಚ್ಚುವುದು ಬಿಜೆಪಿ ಸರ್ಕಾರದ ಹುನ್ನಾರ ಎಂದು ದೂರಿದ್ದಾರೆ.
ಕ್ಯಾಂಟೀನ್ ಗಳಿಗೆ ಪ್ರತಿದಿನ ಬರುತ್ತಿದ್ದ 300-400 ಜನರ ಸಂಖ್ಯೆ ಈಗ 50-100ಕ್ಕೆ ಇಳಿದಿದೆಯಂತೆ. ನಗರದ ಬಡವರೆಲ್ಲರೂ ಶ್ರೀಮಂತರಾದರೇ? ಎಂದು ಪ್ರಶ್ನಿಸಿರುವ ಅವರು ಇಂದಿರಾ ಕ್ಯಾಂಟೀನ್ ಮುಚ್ಚಲು ಹುನ್ನಾರ ನಡೆಸುತ್ತಿದೆ ಎಂದು ಸರ್ಕಾರದ ವಿರುದ್ದ ಆರೋಪಿಸಿದ್ದಾರೆ.