ಬೆಂಗಳೂರು, (DaijiworldNews/HR): ಸಿದ್ದರಾಮಯ್ಯ ಅವರ ಆಡಳಿತ ಅವಧಿಯಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಸರ್ಕಾರ ಆರೋಪಿಸುತ್ತಿದ್ದು, ಈ ಬಗ್ಗೆ ಸರ್ಕಾರ ಸಿಬಿಐ ತನಿಖೆ ನಡೆಸಲಿ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಒತ್ತಾಯಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಹಾಗೂ ಸಚಿವರು ನೇಮಕಾತಿಗೆ ಮಾತ್ರ ಅನುಮತಿ ನೀಡುತ್ತಾರೆ. ಆಯ್ಕೆ ಪ್ರಕ್ರಿಯೆಯು ಜಂಟಿ ನಿರ್ದೇಶಕರ ನೇತೃತ್ವದಲ್ಲಿ ನಡೆಯುತ್ತಿದೆ. ಅಧಿಕಾರಿಗಳು ಭಾಗಿಯಾಗಿದ್ದರೆ ಶಿಕ್ಷೆಯಾಗಲಿ ಎಂದರು.
ಇನ್ನು ಸಿದ್ದರಾಮಯ್ಯದ ಅವಧಿಯಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ರಾಜ್ಯ ಸರ್ಕಾರವು ಸಿಬಿಐ ಸೇರಿದಂತೆ ಇನ್ನಿತರ ಸಂಸ್ಥೆಗಳ ಮೂಲಕ ತನಿಖೆ ನಡೆಸಲಿ ಎಂದು ಹೇಳಿದ್ದಾರೆ.