ಕೊಚ್ಚಿ, ಸೆ 21 (DaijiworldNews/DB): ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಎಲ್ಲರೂ ಸ್ವತಂತ್ರರು. ಇದಕ್ಕೆ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ನಾಯಕ ರಾಹುಲ್ ಗಾಂಧಿ ಅವರ ಸಮ್ಮತಿ ಬೇಕಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂವಹನ ಉಸ್ತುವಾರಿ) ಜೈರಾಮ್ ರಮೇಶ್ ಸ್ಪಷ್ಟಪಡಿಸಿದ್ದಾರೆ.
10 ಪಿಸಿಸಿ ಪ್ರತಿನಿಧಿಗಳ ಬೆಂಬಲದೊಂದಿಗೆ ಯಾರು ಬೇಕಾದರೂ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬಹುದು. ಅದಕ್ಕೆ ವರಿಷ್ಠರ ಅನುಮತಿ ಅಗತ್ಯವಿಲ್ಲ ಎಂದಿದ್ದಾರೆ.
ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸುತ್ತಿರುವ ಏಕೈಕ ಪಕ್ಷ ಕಾಂಗ್ರೆಸ್. ಕಾಮರಾಜ್ ಮಾದರಿಯಲ್ಲೇ ಅಧ್ಯಕ್ಷರ ಆಯ್ಕೆ ಒಮ್ಮತದ ನಿರ್ಧಾರದೊಂದಿಗೆ ನಡೆಯುವ ವಿಶ್ವಾಸ ಹೊಂದಲಾಗಿದೆ. ಒಂದು ವೇಳೆ ಅದಾಗದಿದ್ದಲ್ಲಿ ಚುನಾವಣೆ ನಡೆಯಲಿದೆ ಎಂದರು.
ಯಾರೆಲ್ಲ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆಂಬ ಬಗ್ಗೆ ನನಗೆ ಮಾಹಿತಿಯಿಲ್ಲನಾನಂತೂ ಸ್ಪರ್ಧೆ ಮಾಡುವುದಿಲ್ಲ ಎಂದು ಿದೇ ವೇಳೆ ಅವರು ಸ್ಪಷ್ಟಪಡಿಸಿದರು.