ನವದೆಹಲಿ, ಸೆ 23 (DaijiworldNews/DB): ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಜಾರಿಯಲ್ಲಿ ಸರಿಯಾದ ಕ್ರಮ ಅನುಸರಿಸದ ಹಿನ್ನೆಲೆಯಲ್ಲಿ ಪಂಜಾಬ್ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಸುಮಾರು 2000 ಕೋಟಿ ರೂ. ದಂಡ ವಿಧಿಸಿದೆ.
ಎನ್ಜಿಟಿ ಅಧ್ಯಕ್ಷ, ನ್ಯಾಯಮೂರ್ತಿ ಆದರ್ಶ ಕುಮಾರ್ ಗೋಯಲ್ ನೇತೃತ್ವದ ಪೀಠ ಈ ಆದೇಶ ನೀಡಿದೆ. ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಜಾರಿಗೆ ಸಂಬಂಧಿಸಿದಂತೆ ಪಂಜಾಬ್ ಸರ್ಕಾರ ಯಾವುದೇ ವ್ಯವಸ್ಥಿತ ಕ್ರಮ ಕೈಗೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಎನ್ಜಿಟಿ ದಂಡ ವಿಧಿಸಿದೆ ಎಂದು ತಿಳಿದು ಬಂದಿದೆ.
ಪ್ರತಾಪ್ಗಢ, ರಾಯ್ ಬರೇಲಿ ಮತ್ತು ಜೌನ್ಪುರ ಜಿಲ್ಲೆಗಳಲ್ಲಿ ದ್ರವ ತ್ಯಾಜ್ಯವನ್ನು ಸರಿಯಾಗಿ ನಿರ್ವಹಿಸದಕ್ಕಾಗಿ ಉತ್ತರ ಪ್ರದೇಶ ಸರ್ಕಾರಕ್ಕೆ ಎನ್ಜಿಟಿ ಈ ಹಿಮದೆ 100 ಕೋಟಿ ರೂಪಾಯಿ ದಂಡ ವಿಧಿಸಿತ್ತು. ಘನ ಮತ್ತು ದ್ರವ ತ್ಯಾಜ್ಯ ದುರುಪಯೋಗಪಡಿಸಲಾಗಿದೆ ಎಂಬ ಕಾರಣಕ್ಕಾಗಿ ರಾಜಸ್ತಾನ ಸರ್ಕಾರಕ್ಕೂ ಕಳೆದ ವಾರವಷ್ಟೇ 3,000 ಕೋಟಿ ರೂಪಾಯಿ ದಂಡ ವಿಧಿಸಿ ಎನ್ಜಿಟಿ ಆದೇಶಿಸಿತ್ತು.