ನವದೆಹಲಿ, ಸೆ 28 (DaijiworldNews/MS): ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸಂಸದ ಶಶಿ ತರೂರ್ ಅವರ ಪ್ರತಿಸ್ಪರ್ಧಿ ಯಾರು ಎಂಬ ಸಸ್ಪೆನ್ಸ್ ಕೊನೆಗೊಂಡಿದೆ. ದಿಗ್ವಿಜಯ್ ಸಿಂಗ್ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ. ಅವರು ಶೀಘ್ರದಲ್ಲೇ ಚುನಾವಣೆಗೆ ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ.
ಪ್ರಸ್ತುತ, ದಿಗ್ವಿಜಯ್ ಸಿಂಗ್ ಅವರು ರಾಹುಲ್ ಗಾಂಧಿ ಅವರೊಂದಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದು, ಇಂದು ರಾತ್ರಿ ವೇಳೆಗೆ ದೆಹಲಿಗೆ ಮರಳಲಿದ್ದಾರೆ. ಸಂಸದ ಶಶಿ ತರೂರ್ ಮತ್ತು ದಿಗ್ವಿಜಯ್ ಸಿಂಗ್ ಅವರು ಸೆಪ್ಟೆಂಬರ್ 30 ರಂದು
ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.
ಈ ಹಿಂದೆ ಶಶಿ ತರೂರ್ ಮತ್ತು ಅಶೋಕ್ ಗೆಹ್ಲೋಟ್ ಅವರ ಹೆಸರುಗಳು ಕಾಂಗ್ರೆಸ್ ಮುಖ್ಯಸ್ಥರ ಆಯ್ಕೆಯ ರೇಸ್ನಲ್ಲಿ ಕೇಳಿ ಬಂದಿತ್ತು. ಆದ್ರೆ, ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ಗದ್ದಲದ ನಂತರ, ಅಶೋಕ್ ಗೆಹ್ಲೋಟ್ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಅನುಮಾನವಿದೆ. ಮತ್ತೊಂದೆಡೆ, ಶಶಿ ತರೂರ್ ಅವರ ಅಭ್ಯರ್ಥಿಯನ್ನು ದೃಢೀಕರಿಸಲಾಗಿದೆ ಎಂದು ಪರಿಗಣಿಸಲಾಗಿದೆ. ಅವರು ಸೆಪ್ಟೆಂಬರ್ 30ರಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.